ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ/ಬಾಳೆಹಣ್ಣು ವಿತರಣೆ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ
ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ/ಬಾಳೆಹಣ್ಣು ವಿತರಣೆ:
2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-106ರಲ್ಲಿ ಕೆಳಕಂಡಂತೆ ಘೋಷಿಸಲಾಗಿದೆ. “ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟಿ/ಬಾಳೆಹಣ್ಣನ್ನು ಅಜೀಮ್ ಪ್ರೇಮ್ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ.”
ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2021-22ನೇ ಸಾಲಿನ ಮಧ್ಯಾಹ್ನ ಉಪಹಾರ ಯೋಜನೆಗೆ ಸಂಬಂಧಿಸಿದ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾದ ಕೇಂದ್ರ ಸರ್ಕಾರದ ಪಿ.ಎ.ಬಿ ಸಭಾ ನಡವಳಿಯಲ್ಲಿ Flexibility for New Intervention ಚಟುವಟಿಕೆಗಳಡಿ ಬೀದರ್, ಬಳ್ಳಾರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ 1 ರಿಂದ 08ನೇ ತರಗತಿಗಳ ವರೆಗೆ ವ್ಯಾಸಂಗ ಮಾಡುತ್ತಿರುವ ಫಲಾನುಭವಿ ವಿದ್ಯಾರ್ಥಿಗಳಿಗೆ 46 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ (Supplementary Nutrition) ಮೊಟ್ಟೆ ಅಥವಾ ಇತರೆ ಪೌಷ್ಠಿಕ ಆಹಾರ ಪದಾರ್ಥವನ್ನು ವಿತರಿಸಲು ಆದೇಶಿಸಲಾಗಿದೆ.
ಮೇಲೆ ಓದಲಾದ ಕ್ರಮಾಂಕ (3)ರ ಸರ್ಕಾರದ ಆದೇಶದಲ್ಲಿ 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಮಧ್ಯಾಹ್ನ ಉಪಹಾರ ಯೋಜನೆ) ರಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 1 ರಿಂದ 8ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 46 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣು/ಚಿಕ್ಕಿಯನ್ನು ವಿತರಿಸಲು ಆದೇಶಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (4)ರ ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿನ ಜುಲೈ ಆಯವ್ಯಯ ಭಾಷಣದ ಕಂಡಿಕೆ-91ರಲ್ಲಿನ ಘೋಷಣೆಯಂತೆ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, (ಪ್ರತಿ ವಿದ್ಯಾರ್ಥಿಯ ಒಂದು ದಿನದ ಘಟಕ ವೆಚ್ಚ ರೂ 6/- ರಂತೆ) 80 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ (Supplementary Nutrition) ಮೊಟ್ಟೆ /ಶೇಂಗಾ ಚಿಕ್ಕಿ/ಬಾಳೆಹಣ್ಣನ್ನು ವಿತರಿಸಲು ಆದೇಶಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (5)ರ ಸರ್ಕಾರದ ಆದೇಶದಲ್ಲಿ ಅಜೀಂ ಪ್ರೇಮ್ಜಿ ಫೌಂಡೇಶನ್ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (ಈಗಾಗಲೇ ವಾರದಲ್ಲಿ ಎರಡು ದಿನ ನೀಡಲಾಗುತ್ತಿರುವ ಪೂರಕ ಪೌಷ್ಠಿಕ ಆಹಾರದ ಹೊರತಾಗಿ) ವಾರದಲ್ಲಿ ನಾಲ್ಕು ದಿನ ಪೂರಕ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಬ್ಯಾಂಕ್ ಖಾತೆಗಳನ್ನು ತೆರೆಯಲು ಆದೇಶಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (6)ರ ಸರ್ಕಾರದ ಆದೇಶದಲ್ಲಿ ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (7)ರ ಆರ್ಥಿಕ ಇಲಾಖೆ ಅನಧಿಕೃತ ಟಿಪ್ಪಣಿಯಲ್ಲಿ (Budget Advice) 2025-26ನೇ ಸಾಲಿನ ಆಯವ್ಯಯ ಕಂಡಿಕೆ-106ರ ಘೋಷಣೆಯನ್ನು ಮುಂದುವರೆದ ಮಾರ್ಪಾಡಿತ ಯೋಜನೆಯೆಂದು ಪರಿಗಣಿಸಿ ಸದರಿ ಯೋಜನೆಯನ್ನು ಆಜೀಂ ಪ್ರೇಮ್ಜಿ ಫೌಂಡೇಶನ್ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ತಿಳಿಸಲಾಗಿದೆ.
ಮೇಲೆ ಓದಲಾದ ಕ್ರಮಾಂಕ (8)ರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರ ಪ್ರಸ್ತಾವನೆಯಲ್ಲಿ, 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-106ರ ಸರ್ಕಾರಿ (ಪೂರ್ವ ಪ್ರಾಥಮಿಕ ತರಗತಿಗಳನ್ನು ಒಳಗೊಂಡಂತೆ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 51,61390 ವಿದ್ಯಾರ್ಥಿಗಳಿಗೆ ವಾರದಲ್ಲಿ 02 ದಿನಗಳಂತೆ ಒಟ್ಟಾರೆ ಒಂದು ಶೈಕ್ಷಣಿಕ ವರ್ಷದಲ್ಲಿ 82 ದಿನಗಳಿಗೆ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟಿ/ಬಾಳೆಹಣ್ಣನ್ನು ಪ್ರತಿ ವಿದ್ಯಾರ್ಥಿಗೆ ಪ್ರತಿ ದಿನಕ್ಕೆ ರೂ.6/-ಗಳ ಘಟಕ ವೆಚ್ಚದಂತೆ ನೀಡಲು ಅಗತ್ಯವಿರುವ ರೂ.25394.04 ಲಕ್ಷಗಳನ್ನು ರಾಜ್ಯ ಸರ್ಕಾರದಿಂದ (ಕೇಂದ್ರ ಪಾಲಿನ ಸಹಯೋಗದೊಂದಿಗೆ) ಲೆಕ್ಕ ಶೀರ್ಷಿಕೆ: 2202-00-101-0-20, 2202-00-101-0-21 2 2202-00-101-0-18 ರಡಿ ಆಯವ್ಯಯದಲ್ಲಿ ನಿಗದಿಯಾಗಿರುವ ಅನುದಾನದಿಂದ ಭರಿಸಲಾಗುತ್ತಿದ್ದು, ಉಳಿದ 04 ದಿನಗಳಿಗೆ ಸರ್ಕಾರಿ (ಪೂರ್ವ ಪ್ರಾಥಮಿಕ ತರಗತಿಗಳನ್ನು ಒಳಗೊಂಡಂತೆ) ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 51,61,390 ವಿದ್ಯಾರ್ಥಿಗಳಿಗೆ ಒಂದು ಶೈಕ್ಷಣಿಕ ವರ್ಷದಲ್ಲಿ ಒಟ್ಟಾರೆ 162 ದಿನಗಳಿಗೆ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ/ಬಾಳೆಹಣ್ಣನ್ನು ಪ್ರತಿ ವಿದ್ಯಾರ್ಥಿಗೆ ಪ್ರತಿ ದಿನಕ್ಕೆ ರೂ.6/-ಗಳ ಘಟಕ ವೆಚ್ಚದಂತೆ ನೀಡಲು ಒಟ್ಟಾರೆಯಾಗಿ ರೂ.50168.71 ಲಕ್ಷಗಳ ವಾರ್ಷಿಕ ಅನುದಾನ ಅಗತ್ಯವಿರುವುದಾಗಿ ಪ್ರಸ್ತಾಪಿಸುತ್ತಾ (5161390+6+162/100000 50168,71 ಲಕ್ಷಗಳು) ಈ ಮೊತ್ತವನ್ನು ಆಯವ್ಯಯ ಕಂಡಿಕೆ-106 ರಂತೆ ಅಜೀಂ ಪ್ರೇಮ್ ಫೌಂಡೇಶನ್ ಸಂಸ್ಥೆಯಿಂದ ಭರಿಸಬೇಕಾಗಿರುವುದಾಗಿ ಪ್ರಸ್ತಾಪಿಸಿರುತ್ತಾರೆ. ತರಗತಿ ಮತ್ತು ಆಡಳಿತ ಮಂಡಳಿವಾರು ವಿದ್ಯಾರ್ಥಿಗಳ ಸಂಖ್ಯೆ ಕೆಳಕಂಡಂತಿದೆ.

ಲೆಕ್ಕ ಶೀರ್ಷಿಕೆವಾರು ರಾಜ್ಯ ಸರ್ಕಾರದಿಂದ (ಕೇಂದ್ರ ಪಾಲಿನ Flexi Fund ಸಹಯೋಗದೊಂದಿಗೆ) ಸರ್ಕಾರಿ (ಪೂರ್ವ ಪ್ರಾಥಮಿಕ ತರಗತಿಗಳನ್ನು ಒಳಗೊಂಡಂತೆ)ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 51,61,390 ವಿದ್ಯಾರ್ಥಿಗಳಿಗೆ ವಾರದಲ್ಲಿ 02 ದಿನಗಳಂತೆ ಒಟ್ಟಾರೆ ಒಂದು ಶೈಕ್ಷಣಿಕ ವರ್ಷದಲ್ಲಿ 82 ದಿನಗಳಿಗೆ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ/ಬಾಳೆಹಣ್ಣನ್ನು ವಿತರಿಸಲು ಭರಿಸಲಾಗಿರುವ ಅನುದಾನದ ವಿವರ ಕೆಳಕಂಡಂತಿದೆ.

ಈ ಪ್ರಸ್ತಾವನೆಯಲ್ಲಿ ವಿವರಿಸಲಾದ ಮೇಲ್ಕಂಡ ಅಂಶಗಳನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಿ. ಈ ಕೆಳಕಂಡಂತೆ ಆದೇಶಿಸಿದೆ.
ಸರ್ಕಾರದ ಆದೇಶ ಸಂಖ್ಯೆ: ಇಪಿ 58 ಎಂಎಂಎಸ್ 2025, ಬೆಂಗಳೂರು, ದಿನಾಂಕ: 05.06.2025
2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-106ರ ಘೋಷಣೆಯಂತೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರದಲ್ಲಿ 02 ದಿನಗಳಿಗೆ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿರುವ ಪೂರಕ ಪೌಷ್ಠಿಕ ಆಹಾರ (ಮೊಟ್ಟೆ/ಬಾಳೆ ಹಣ್ಣು) ವಿತರಣೆ ಯೋಜನೆಯನ್ನು ಅಜೀಂ ಪ್ರೇಮ್ ಫೌಂಡೇಶನ್ ಸಂಸ್ಥೆಯ ಸಹಯೋಗದೊಂದಿಗೆ ವಾರದಲ್ಲಿ 06 ದಿನಗಳಿಗೆ ಈಗಾಗಲೇ ವಿಸ್ತರಿಸಲಾಗಿರುವುದರಿಂದ ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸಲು, ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ಅನುಮತಿ ನೀಡಿ ಆದೇಶಿಸಿದೆ.
ಆಯುಕ್ತರು ಶಾಲಾ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪ ನಿರ್ದೇಶಕರು (ಆಡಳಿತ), ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪಾಲಿಸಬೇಕಾಗಿರುವ ಷರತ್ತುಗಳು:-
1) 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-106ರ ಘೋಷಣೆಯ ಕಾರ್ಯಕ್ರಮವನ್ನು ಆರ್ಥಿಕ ಇಲಾಖೆಯಿಂದ ನೀಡಲಾಗಿರುವ Budget Advice ರಂತೆ ಕಟ್ಟುನಿಟ್ಟಾಗಿ ಅನುಷ್ಟಾನ ಮಾಡತಕ್ಕದ್ದು.
2) ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು, ಪ್ರತಿ ದಿನ ಪೂರ್ವಾಹ್ನ 11.00 ಗಂಟೆಯೊಳಗಾಗಿ ಶಾಲೆಗೆ ಹಾಜರಾದ ಎಲ್ಲಾ ಮಕ್ಕಳ ಹಾಜರಾತಿ ಮಾಹಿತಿಯನ್ನು ಪಡೆದು SATS ತಂತ್ರಾಂಶದಲ್ಲಿ ನಮೂದಿಸಿ, ಸದರಿ ಹಾಜರಾತಿ ಮಾಹಿತಿಯನ್ನು ಶಾಲಾ ಮುಖ್ಯ ಶಿಕ್ಷಕರು OTP ಮೂಲಕ ಇ-ಸಹಿ ಯೊಂದಿಗೆ ದೃಢೀಕರಿಸುವ ವ್ಯವಸ್ಥೆಯನ್ನು SATS ತಂತ್ರಾಂಶದಲ್ಲಿ ಆಯುಕ್ತರು, ಶಿಕ್ಷಣ ಇಲಾಖೆ ಇವರು ಈ ವಾರದಲ್ಲಿಯೇ ಕಲ್ಪಿಸಕ್ಕದ್ದು ಹಾಗೂ ಈ ಸಂಬಂಧ ಶಾಲಾ ಮುಖ್ಯಶಿಕ್ಷಕರಿಗೆ ಸೂಕ್ತ ತರಬೇತಿಯನ್ನು ನೀಡತಕ್ಕದ್ದು. ಕ್ಲಸ್ಟರ್ ಹಂತದಲ್ಲಿ ಸದರಿ ಪ್ರಕ್ರಿಯೆಯ ಜವಾಬ್ದಾರಿಯನ್ನು ಸಂಬಂಧಿಸಿದ ಸಮೂಹ ಸಂಪನ್ಮೂಲ ವ್ಯಕ್ತಿಗಳಿಗೆ, ತಾಲ್ಲೂಕು ಹಂತದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯ ಸಹಾಯಕ ನಿರ್ದೇಶಕರಿಗೆ ಮತ್ತು ಜಿಲ್ಲಾ ಹಂತದಲ್ಲಿ ಸಂಬಂಧಿಸಿದ ಉಪನಿರ್ದೇಶಕರು (ಆಡಳಿತ) ಹಾಗೂ ಮಧ್ಯಾಹ್ನ ಉಪಹಾರ ಯೋಜನೆಯ ಶಿಕ್ಷಣಾಧಿಕಾರಿಗಳಿಗೆ ನೀಡತಕ್ಕದ್ದು.
3) SATS ತಂತ್ರಾಂಶದಲ್ಲಿ ಶಾಲಾ ಮುಖ್ಯ ಶಿಕ್ಷಕರಿಂದ ಇ-ಸಹಿಯೊಂದಿಗೆ ದೃಢೀಕರಿಸಲಾದ ಹಾಜರಾತಿ ಮಾಹಿತಿಯನ್ನು ಎಲ್ಲಾ ಮಧ್ಯಾಹ್ನ ಉಪಹಾರ ಮತ್ತು ಕ್ಷೀರಭಾಗ್ಯ ಯೋಜನೆಗಳಿಗೆ ಹಾಗೂ ಭಾರತ ಸರ್ಕಾರದ ಸ್ವಯಂಚಾಲಿತ ಮೇಲ್ವಿಚಾರಣಾ ವ್ಯವಸ್ಥೆಗೆ (Automated Monitoring System) ಮಾಹಿತಿಗಳನ್ನು ಇಂಧೀಕರಿಸಲು ಪರಿಗಣಿಸತಕ್ಕದ್ದು.
4) ಪೂರಕ ಪೌಷ್ಟಿಕಾಂಶದ ರೂಪದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗುವ ಮೊಟ್ಟೆಯು ಉತ್ತಮಗುಣಮಟ್ಟವುಳ್ಳದಾಗಿದ್ದು ಕನಿಷ್ಠ 50g ತೂಕವನ್ನು ಹೊಂದಿರಬೇಕು ಹಾಗೂ ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಪ್ರತಿ ದಿನ 02 ಉತ್ತಮವಾದ ಬಾಳೆಹಣ್ಣನ್ನು ನೀಡತಕ್ಕದ್ದು, ವಿದ್ಯಾರ್ಥಿಗಳಿಗೆ ವಿತರಿಸಲಾಗುವ ಮೊಟ್ಟೆ ಹಾಗೂ ಬಾಳೆಹಣ್ಣಿನಲ್ಲಿನ ಪೋಷಕಾಂಶಗಳ ಲಭ್ಯತೆಯ ವಿವರಗಳು ಕೆಳಕಂಡಂತಿದೆ.

5) ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು, ಪ್ರತಿ ದಿನ SATS ತಂತ್ರಾಂಶದಲ್ಲಿ ಶಾಲಾವಾರು, ತಾಲ್ಲೂಕು ವಾರು ಮತ್ತು ಜಿಲ್ಲಾವಾರು ಮೊಟ್ಟೆಯನ್ನು ಸೇವಿಸಿದ ವಿದ್ಯಾರ್ಥಿಗಳ ಸಂಖ್ಯೆ, ಬಾಳೆಹಣ್ಣನ್ನು ಸೇವಿಸಿದ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಮೊಟ್ಟೆ/ಬಾಳೆಹಣ್ಣನ್ನು ಸೇವಿಸಲು ನಿರಾಕರಿಸಿದ ವಿದ್ಯಾರ್ಥಿಗಳ ವಿವರಗಳು ಇಲಾಖೆಗೆ ಲಭ್ಯವಾಗುವಂತೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸತಕ್ಕದ್ದು.
6) ಪ್ರತಿ ದಿನ ಬೆಳಗಿನ ಪ್ರಾರ್ಥನೆಯ ವೇಳೆ ಹತ್ತು ನಿಮಿಷ ಶಾಲೆಗಳ ಮುಖ್ಯಶಿಕ್ಷಕರು ಮೊಟ್ಟೆ ಹಾಗೂ ಬಾಳೆಹಣ್ಣಿನಲ್ಲಿನ ಪೋಷಕಾಂಶಗಳ ಬಗ್ಗೆ ಹಾಗೂ ಪ್ರಯೋಜನೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿ ಅರಿವು ಮೂಡಿಸಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು ಸುತ್ತೋಲೆಯನ್ನು ಹೊರಡಿಸಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ನಿರ್ದೇಶನ ನೀಡತಕ್ಕದ್ದು.
7) ಪ್ರತಿ ದಿನ ಶಾಲಾ ಮುಖ್ಯ ಶಿಕ್ಷಕರು SATS ತಂತ್ರಾಂಶದಲ್ಲಿ ನಮೂದಿಸಿ ದೃಢೀಕರಿಸುವ ವಿದ್ಯಾರ್ಥಿಗಳ ಸಂಖ್ಯೆಯ ವಿವರಗಳು ಅಧಿಕವರದಿಯಾಗದಂತೆ (Over Reporting) ಪರಿಶೀಲಿಸಿ ಖಾತ್ರಿ ಪಡಿಸಿಕೊಳ್ಳಲು ಕ್ಲಸ್ಟರ್ ಹಂತದಲ್ಲಿ ಸಂಬಂಧಿಸಿದ ಸಮೂಹ ಸಂಪನ್ಮೂಲ ವ್ಯಕ್ತಿಗಳು ಪ್ರತಿದಿನ ಖಾತ್ರಿಪಡಿಸಿಕೊಳ್ಳತಕ್ಕದ್ದು ಹಾಗೂ ಈ ಪ್ರಕ್ರಿಯೆಯನ್ನು ಪ್ರತಿ ದಿನ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು ಸೂಕ್ತ ನಿರ್ದೇಶನವನ್ನು ನೀಡತಕ್ಕದ್ದು.
8) ಮಧ್ಯಾಹ್ನ ಉಪಹಾರ ಯೋಜನೆಯ ನಿರ್ದೇಶಕರ ವೆಬ್ಸೈಟ್ನಲ್ಲಿ ಹಾಗೂ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರ ವೆಬ್ಸೈಟ್ನಲ್ಲಿ ಪ್ರತಿದಿನ ಮಧ್ಯಾಹ್ನ 3.00 ಗಂಟೆಯೊಳಗಾಗಿ ಕ್ರೋಡೀಕರಿಸಿ ಶಾಲಾವಾರು ಮಕ್ಕಳ ಹಾಜರಾತಿ ವಿವರಗಳು ಲಭ್ಯವಾಗುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು ತುರ್ತು ಕ್ರಮವಹಿಸತಕ್ಕದ್ದು.
9) ಮಧ್ಯಾಹ್ನ ಉಪಹಾರ ಯೋಜನೆಯ ತಾಲ್ಲೂಕು ಹಂತದ ಅಧಿಕಾರಿಗಳು, ಪ್ರತಿ ತಿಂಗಳು ತಮ್ಮ ವ್ಯಾಪ್ತಿಯಲ್ಲಿನ ಮುಖ್ಯ ಶಿಕ್ಷಕರ ಹಾಗೂ ಸಂಬಂಧಿಸಿದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರ ಸಭೆ ಕರೆದು, ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆ ಹಾಗೂ ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮದ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸತಕ್ಕದ್ದು ಹಾಗೂ ಸದರಿ ಸಭಾ ನಡವಳಿ ಪ್ರಕ್ರಿಯೆಯನ್ನು Geo tagged Photographs ನೊಂದಿಗೆ SATS ತಂತ್ರಾಂಶದಲ್ಲಿ Upload ಮಾಡಲು ಸೂಕ್ತ ವ್ಯವಸ್ಥೆಯನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು ಕಲ್ಪಿಸಿ ನಿರ್ದೇಶನಗಳನ್ನು ನೀಡತಕ್ಕದ್ದು.
10) ಪ್ರತಿ ವಾರ ಕನಿಷ್ಠ ಹತ್ತು ಪೋಷಕರನ್ನು ಯಾದೃಚ್ಛಿಕೀಕರಣದ (Randomisation) ಮೂಲಕ ಶಾಲಾ ಮುಖ್ಯಸ್ಥರು ಶಾಲಾ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟವನ್ನು ಸೇವಿಸಲು ಆಹ್ವಾನಿಸಬೇಕು. ಶಾಲಾ ಶಿಕ್ಷಣ ಆಯುಕ್ತರು ಇದನ್ನು ತಕ್ಷಣವೇ ಜಾರಿಗೆ ತರುವಂತೆ ಖಚಿತಪಡಿಸಿಕೊಳ್ಳತಕ್ಕದ್ದು.
11) ಶಾಲಾ ಮಟ್ಟದ ಬ್ಯಾಂಕ್ ಖಾತೆಗಳ ನಿರ್ವಹಣೆ ಕುರಿತು ಶಾಲೆಗಳ ಮುಖ್ಯಶಿಕ್ಷಕರಿಗೆ ತರಬೇತಿಯನ್ನು ನೀಡತಕ್ಕದ್ದು, ಮಕ್ಕಳ ದಿನಾಚರಣೆ ದಿನದಂದು ಶಾಲೆಯಲ್ಲಿನ ಎಲ್ಲಾ ಮಕ್ಕಳ ಪೋಷಕರನ್ನು ಮಧ್ಯಾಹ್ನದ ಊಟಕ್ಕೆ ಆಹ್ವಾನಿಸಬೇಕು ಹಾಗೂ ಮಕ್ಕಳ ಪೋಷಕರ ಸಮ್ಮುಖದಲ್ಲಿ ಶಾಲಾ ಲೆಕ್ಕಪತ್ರಗಳ ವಿವರಗಳನ್ನು ಶಾಲಾ ಮುಖ್ಯಸ್ಥರು ಶಿಕ್ಷಕರು ಓದಿ ಸಲ್ಲಿಸತಕ್ಕದ್ದು. ಶಾಲಾವಾರು ಖಾತೆ ನಿರ್ವಹಣೆ, ಸ್ಪಾಕ್, ಇಂಡೆಂಟ್ ಸೃಜನೆ, ಬಿಲ್ಲುಗಳ ಪಾವತಿಗಳು, ಮತ್ತು ವೋಚರ್ಗಳನ್ನು SATS ನಲ್ಲಿ ಸ್ವಯಂಚಾಲಿತಗೊಳಿಸಬೇಕು. ಶಾಲಾ ಶಿಕ್ಷಣ ಆಯುಕ್ತರು ಇದನ್ನು ತಕ್ಷಣವೇ ಕಾರ್ಯಗತಗೊಳಿಸುವುದನ್ನು ಖಚಿತಪಡಿಸಿಕೊಳ್ಳತಕ್ಕದ್ದು.
12) ಶಾಲೆ ನಡೆಯುವ ಅಂದರೆ ಬೋಧನಾ ಸಮಯದಲ್ಲಿ ಶಾಲಾ ಮುಖ್ಯ ಶಿಕ್ಷಕರನ್ನು, ಯಾವುದೇ ಸಭೆ ಸಮಾರಂಭಗಳಿಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪ ನಿರ್ದೇಶಕರು (ಆಡಳಿತ), ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಧ್ಯಾಹ್ನ ಉಪಹಾರ ಯೋಜನೆಯ ಶಿಕ್ಷಣಾಧಿಕಾರಿಗಳು ಮತ್ತು ಸಹ ನಿರ್ದೇಶಕರು ಆಹ್ವಾನಿಸಕೂಡದು. ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಶಾಲಾ ಬೋಧನಾ ಸಮಯವನ್ನು ಹೊರತು ಪಡಿಸಿದ ವೇಳೆಯಲ್ಲಿ ಶಾಲೆ ನಡೆಯುವ ಸಂದರ್ಭದಲ್ಲಿ ಮುಖ್ಯ ಶಿಕ್ಷಕರ ಸಭೆಗಳನ್ನು ಆನ್ಲೈನ್ ಮೂಲಕ ನಡೆಸುವುದು.
13) 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-106ರ ಘೋಷಣೆಯಂತೆ ವಾರದಲ್ಲಿ 06 ದಿನಗಳು ವಿತರಿಸಲಾಗುವ ಪೂರಕ ಪೌಷ್ಠಿಕ ಆಹಾರದ (ಮೊಟ್ಟಿ/ಬಾಳೆ ಹಣ್ಣು) ವೆಚ್ಚದ ಪೈಕಿ ವಾರದಲ್ಲಿನ 02 ದಿನಗಳ ಪೂರಕ ಪೌಷ್ಠಿಕ ಆಹಾರದ (ಮೊಟ್ಟೆ/ಬಾಳೆ ಹಣ್ಣು) ವೆಚ್ಚವನ್ನು ರಾಜ್ಯ ಸರ್ಕಾರವು (ಕೇಂದ್ರ ಪಾಲಿನ Flexi Fund ಸಹಯೋಗದೊಂದಿಗೆ) ಲೆಕ್ಕ ಶೀರ್ಷಿಕೆ: 2202-00-101-0-20, 2202-00-101-0-21 ಮತ್ತು 2202-00-101-0-18 ರಡಿ ಆಯವ್ಯಯದಲ್ಲಿ ನಿಗದಿಯಾಗಿರುವ ಅನುದಾನದಿಂದ ಭರಿಸತಕ್ಕದ್ದು ಹಾಗೂ ಉಳಿದ 04 ದಿನಗಳ ಪೂರಕ ಪೌಷ್ಠಿಕ ಆಹಾರದ ವೆಚ್ಚವನ್ನು ಸಂಪೂರ್ಣವಾಗಿ ಅಜೀಂ ಪ್ರೇಮ್ ಫೌಂಡೇಶನ್ ಸಂಸ್ಥೆಯೊಂದಿಗೆ ಮಾಡಿಕೊಳ್ಳಲಾಗಿರುವ ಒಡಂಬಡಿಕೆಯಂತೆ ಸದರಿ ಸಂಸ್ಥೆಯಿಂದ ನೀಡಲಾಗುವ ಅನುದಾನದಿಂದ ಭರಿಸತಕ್ಕದ್ದು.
14) ಪೂರಕ ಪೌಷ್ಟಿಕ ಆಹಾರ (ಮೊಟ್ಟೆ/ಬಾಳೆ ಹಣ್ಣು) ವಿತರಣೆಗೆ ಸಂಬಂಧಿಸಿದಂತೆ ಅಜೀಂ ಪ್ರೇಮ್ ಫೌಂಡೇಶನ್ ಸಂಸ್ಥೆಯೊಂದಿಗೆ ಮಾಡಿಕೊಳ್ಳಲಾಗಿರುವ ಒಡಂಬಡಿಕೆಯಲ್ಲಿ ಷರತ್ತುಗಳನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು ಸಂಪೂರ್ಣವಾಗಿ ಪಾಲಿಸತಕ್ಕದ್ದು.
15) ಅಜೀಂ ಪ್ರೇಮ್ ಫೌಂಡೇಶನ್ ಸಂಸ್ಥೆಯಿಂದ ಪೂರಕ ಪೌಷ್ಠಿಕ ಆಹಾರ (ಮೊಟ್ಟೆ/ಬಾಳೆ ಹಣ್ಣು) ವಿತರಣೆಗೆ ಬಿಡುಗಡೆ ಮಾಡಲಾಗುವ ಅನುದಾನವನ್ನು ತುರ್ತಾಗಿ ಜಿಲ್ಲಾ/ ತಾಲ್ಲೂಕು ಹಂತಗಳಿಗೆ ಬಿಡುಗಡೆ ಮಾಡಿ ಶಾಲೆಗಳಿಗೆ ಲಭ್ಯವಾಗುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಹಾಗೂ ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ನಿಗದಿತ ಕಾಲಮಿತಿಯೊಳಗೆ ಕ್ರಮವಹಿಸತಕ್ಕದ್ದು.
16) ಅಜೀಂ ಪ್ರೇಮ್ ಫೌಂಡೇಶನ್ ಸಂಸ್ಥೆಯಿಂದ ಬಿಡುಗಡೆಯಾದ ಅನುದಾನವನ್ನು ವೆಚ್ಚ ಮಾಡಿದ ನಂತರ ಸದರಿ ಸಂಸ್ಥೆಗೆ ಬಳಕೆ ಪ್ರಮಾಣ ಪತ್ರವನ್ನು ನಿಗದಿತ ಕಾಲಮಿತಿಯೊಳಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆಗೆ ಇವರು ಸಲ್ಲಿಸತಕ್ಕದ್ದು.
17) ಶಾಲಾ ಹಂತದಲ್ಲಿ ಪೂರಕ ಪೌಷ್ಠಿಕ ಆಹಾರದ (ಮೊಟ್ಟೆ/ಬಾಳೆ ಹಣ್ಣು) ಅನುದಾನ ಬಳಕೆ, ಪೂರಕ ಪೌಷ್ಠಿಕ ಆಹಾರದ ಖರೀದಿ ಪ್ರಕ್ರಿಯೆ ಹಾಗೂ ಪೌಷ್ಠಿಕ ಆಹಾರದ ಗುಣಮಟ್ಟದ ಪರಿಶೀಲನೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಈಗಾಗಲೇ ನೀಡಲಾಗಿರುವ SOP ಯಂತೆ ಕ್ರಮವಹಿಸತಕ್ಕದ್ದು ಹಾಗೂ ಈ ಬಗ್ಗೆ ಮತ್ತೊಮ್ಮೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು ಸಮಗ್ರವಾದ ಸುತ್ತೋಲೆಯನ್ನು ಹೊರಡಿಸತಕ್ಕದ್ದು.
18) ಪೂರಕ ಪೌಷ್ಠಿಕ ಆಹಾರ (ಮೊಟ್ಟೆ/ಬಾಳೆ ಹಣ್ಣು) ವಿತರಣೆಯ ಮೇಲ್ವಿಚಾರಣೆಯನ್ನು ತಾಲ್ಲೂಕು ಹಂತದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಧ್ಯಾಹ್ನ ಉಪಹಾರ ಯೋಜನೆಯ ಸಹಾಯಕ ನಿರ್ದೇಶಕರು, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, ಸಮೂಹ ಸಂಪನ್ಮೂಲ ವ್ಯಕ್ತಿಗಳು ಮತ್ತು ಶಿಕ್ಷಣ ಸಂಯೋಜಕರು ನಿರ್ವಹಿಸತಕ್ಕದ್ದು.
19) ಪೂರಕ ಪೌಷ್ಠಿಕ ಆಹಾರ (ಮೊಟ್ಟೆ/ಬಾಳೆ ಹಣ್ಣು) ವಿತರಣೆಯ ಮೇಲ್ವಿಚಾರಣೆಯನ್ನು ಜಿಲ್ಲಾ ಹಂತದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪ ನಿರ್ದೇಶಕರು (ಆಡಳಿತ), ಉಪನಿರ್ದೇಶಕರು ಅಭಿವೃದ್ಧಿ, ಮತ್ತು ವಿಷಯ ಪರಿವೀಕ್ಷಕರು ನಿರ್ವಹಿಸತಕ್ಕದ್ದು.
20) SATS ತಂತ್ರಾಂಶದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಪ್ರಕ್ರಿಯೆಯಂತೆ ಪೂರಕ ಪೌಷ್ಠಿಕ ಆಹಾರ (ಮೊಟ್ಟೆ/ಬಾಳೆ ಹಣ್ಣು) ವಿತರಣೆಗೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕರ ಹಂತದಲ್ಲಿ ವಿತರಿಸಲಾದ ಪೂರಕ ಪೌಷ್ಠಿಕ ಆಹಾರದ (ಮೊಟ್ಟೆ/ಬಾಳೆ ಹಣ್ಣು) ವಿವರ, ಖರೀದಿಸಲಾದ ಪೂರಕ ಪೌಷ್ಠಿಕ ಆಹಾರ (ಮೊಟ್ಟೆ/ಬಾಳೆ ಹಣ್ಣು) ವಿವರ ಮತ್ತು ಬ್ಯಾಂಕ್ ಬಡ್ಡಿ ವಿವರಗಳನ್ನು ಅಂಕಿ ಅಂಶಗಳನ್ನು ದಾಖಲಿಸತಕ್ಕದ್ದು.
21) ಈ ಆದೇಶವನ್ನು ಹಾಗೂ ಈ ಆದೇಶಕ್ಕೆ ಸಂಬಂಧಿಸಿದಂತೆ ಹೊರಡಿಸಲಾಗುವ ಸುತ್ತೋಲೆ. ಇತರೆ ಆದೇಶಗಳನ್ನು ಮತ್ತು ಆರ್ಥಿಕ ಮತ್ತು ಭೌತಿಕ ಪ್ರಗತಿ ವರದಿಗಳನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಇಲಾಖಾ ವೆಬ್ ಸೈಟ್ನಲ್ಲಿ ಕಡ್ಡಾಯವಾಗಿ ಪ್ರಕಟಿಸತಕ್ಕದ್ದು.
22) ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆ ಕಾರ್ಯಕ್ರಮದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾಲಕಾಲಕ್ಕೆ ಹೊರಡಿಸಲಾಗುವ ಎಲ್ಲಾ ಆದೇಶಗಳನ್ನು ಹಾಗೂ ಆರ್ಥಿಕ ಮತ್ತು ಭೌತಿಕ ಪ್ರಗತಿ ವರದಿಗಳನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ವೆಬ್ ಸೈಟ್ನಲ್ಲಿ ಪ್ರಕಟಿಸತಕ್ಕದ್ದು.
23) ಪೂರಕ ಪೌಷ್ಠಿಕ ಆಹಾರ (ಮೊಟ್ಟೆ/ಬಾಳೆ ಹಣ್ಣು) ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪನಿರ್ದೇಶಕರು (ಆಡಳಿತ), ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಡ್ಡಾಯವಾಗಿ ಕ್ರಮವಹಿಸತಕ್ಕದ್ದು.
24) ಪೂರಕ ಪೌಷ್ಠಿಕ ಆಹಾರ (ಮೊಟ್ಟೆ/ಬಾಳೆ ಹಣ್ಣು) ವಿತರಣೆಗೆ ಸಂಬಂಧಿಸಿದಂತೆ SOP ಯಂತೆ ಅನುಸರಿಸಬೇಕಾಗಿರುವ ಕ್ರಮಗಳ ಬಗ್ಗೆ ಶಾಲಾ ಮುಖ್ಯ ಶಿಕ್ಷಕರಿಗೆ ಮತ್ತು ಅಡುಗೆ ಸಿಬ್ಬಂದಿಗಳಿಗೆ ಕಾಲಕಾಲಕ್ಕೆ ತರಬೇತಿಯನ್ನು ನೀಡತಕ್ಕದ್ದು.
25) ಪೂರಕ ಪೌಷ್ಠಿಕ ಆಹಾರ (ಮೊಟ್ಟೆ/ಬಾಳೆ ಹಣ್ಣು) ವಿತರಣೆಗೆ ಸಂಬಂಧಿಸಿದ ವೆಚ್ಚಗಳಿಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಸೂಕ್ತ ಲೆಕ್ಕ ಪತ್ರವನ್ನು ಇಡತಕ್ಕದ್ದು.
26) ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆರ್ಥಿಕ ಮತ್ತು ಭೌತಿಕ ಗುರಿಗಳನ್ನು ಅಂದರೆ Key Performance Indicator ಗಳನ್ನು ಅವಲೋಕನ (New Decision Support System) ತಂತ್ರಾಂಶದಲ್ಲಿ ನಿಗದಿಪಡಿಸತಕ್ಕದ್ದು.
ಈ ಆದೇಶವನ್ನು ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ: ಆಇ 341 ವೆಚ್ಚ-8/ 2025 ದಿನಾಂಕ:11.04.2025, ಆರ್ಥಿಕ ಇಲಾಖೆ ಟಿಪ್ಪಣಿ ಸಂಖ್ಯೆ: ಆಇ 413 ವೆಚ್ಚ-8/2025 ದಿನಾಂಕ: 12.05.2025, ಯೋಜನಾ ಇಲಾಖೆಯ ಟಿಪ್ಪಣಿ ಸಂಖ್ಯೆ: ಪಿ.ಡಿ.ಎಸ್- ಹೆಚ್.ಡಿ.ಡಿ/57/2025 ದಿನಾಂಕ:08.05.2025ರಲ್ಲಿ ನೀಡಿರುವ ಸಹಮತದನ್ವಯ ಮತ್ತು ಸರ್ಕಾರದ ಆದೇಶ ಸಂಖ್ಯೆ: ಎಫ್ಡಿ 01 ಟಿಎಫ್ಪಿ 2025 ದಿನಾಂಕ:02.04.2025ರಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಿರುವ ಅಧಿಕಾರದನ್ವಯ ಹೊರಡಿಸಿದೆ.