Clarification:ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ: 2025 ಕುರಿತು ಸ್ಪಷ್ಟಿಕರಣ ನೀಡುವ ಬಗ್ಗೆ.
Clarification: ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಗಳ ವಿವಿಧ ಉಪ ಗುಂಪುಗಳಲ್ಲಿ ಪ್ರಾತಿನಿಧ್ಯತೆ ಕುರಿತು Emperical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ (ಉಪ ವರ್ಗೀಕರಣ) ಬಗ್ಗೆ, ವರದಿ ಸಲ್ಲಿಸಲು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಡಾ. ಹೆಚ್. ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಉಲ್ಲೇಖಿತ ಸರ್ಕಾರದ ಆದೇಶದಂತೆ ಏಕ ಸದಸ್ಯ ಆಯೋಗವನ್ನು ರಚಿಸಲಾಗಿರುತ್ತದೆ.
ಸದರಿ ಆಯೋಗ ಈಗಾಗಲೇ ನೀಡಿರುವ ಮಧ್ಯಂತರ ವರದಿಯಂತೆ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ನಡೆಸಲು ಕೈಗತ್ತಿಗೊಳ್ಳಲಾಗಿದೆ. ಸಮೀಕ್ಷೆಯನ್ನು ಮೂರು ಹಂತದಲ್ಲಿ ನಡೆಸಲು ಈಗಾಗಲೇ ಹಲವಾರು ಸೂಚನೆಗಳನ್ನು ಜಿಲ್ಲಾಧಿಕಾರಿಗಳಿಗೆ ಹಾಗೂ ಬಿ.ಬಿ.ಎಂ.ಪಿ ಮುಖ್ಯ ಆಯುಕ್ತರಿಗೆ ಕೈಪಿಡಿ ಮೂಲಕ ಸೂಚಿಸಲಾಗಿರುತ್ತದೆ. ಆದಾಗ್ಯೂ, ಹಲವಾರು ಜಿಲ್ಲಾಧಿಕಾರಿಗಳು ಈ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರದ ಅಗತ್ಯದ ಬಗ್ಗೆ ಸ್ಪಷ್ಟಿಕರಣ ಕೋರಿರುತ್ತಾರೆ.
ಈ ಸಮೀಕ್ಷೆಯು ಸರ್ಕಾರದ ಆದೇಶದನ್ವಯ ಸದರಿ ಏಕ ಸದಸ್ಯ ಆಯೋಗಕ್ಕೆ ದಿನಾಂಕ:03-12-2024 ರಲ್ಲಿ Terms of references ಗಳನ್ನು ಈ ಕೆಳಕಂಡಂತೆ ನಿಗಧಿಪಡಿಸಿ ಆದೇಶಿಸಲಾಗಿರುತ್ತದೆ.
1. ಕರ್ನಾಟಕ ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿಯನ್ನು ಪರಿಗಣಿಸಿ, ವೈಜ್ಞಾನಿಕವಾಗಿ ತರ್ಕಬದ್ಧ ಒಳ ಮೀಸಲಾತಿ (ಉಪ ವರ್ಗೀಕರಣ) ಮತ್ತು ಪರಿಶಿಷ್ಟ ಜಾತಿಗಳಲ್ಲಿ ಸಮಾನ ಜಾತೀಯ (Homogeneous) ಉಪ-ಜಾತಿಗಳ ಗುಂಪುಗಳನ್ನು ಒಟ್ಟುಗೂಡಿಸುವ ಬಗ್ಗೆ ಪರಿಶೀಲಿಸುವುದು.
2. ರಾಜ್ಯದ ಸಾರ್ವಜನಿಕ ಸೇವೆಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳ ಪ್ರವೇಶಾತಿಗಳಲ್ಲಿ ಪ್ರಾತಿನಿಧ್ಯದ ಅಸಮರ್ಪಕತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯದಲ್ಲಿನ ಪರಿಶಿಷ್ಟ ಜಾತಿಗಳ ವಿವಿಧ ಉಪ ಗುಂಪುಗಳಲ್ಲಿ ಅಂತರ್ಹಿಂದುಳಿದಿರುವಿಕೆಯನ್ನು (Inter-se backwardness) ಗುರುತಿಸಲು Empirical data ಸಂಗ್ರಹಿಸುವುದು.
ಕರ್ನಾಟಕ ರಾಜ್ಯದಲ್ಲಿನ ಪರಿಶಿಷ್ಟ ಜಾತಿಗಳ ವಿವಿಧ ಉಪ ಗುಂಪುಗಳಲ್ಲಿ ಅಂತರ್ ಹಿಂದುಳಿದಿರುವಿಕೆ (Inter-se backwardness) ಹಾಗೂ ಪ್ರಾತಿನಿಧ್ಯತೆಯ ಆಧಾರದ ಮೇಲೆ ಸೂಕ್ತ ಒಳ ಮೀಸಲಾತಿ (ಉಪವರ್ಗೀಕರಣ) ಮಾಡುವ ಬಗ್ಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಮೀಸಲಾತಿ ಪ್ರಮಾಣವನ್ನು ನಿಗಧಿಪಡಿಸುವ ಬಗ್ಗೆ ಪರಿಶೀಲಿಸುವುದು.
4. ಆಯೋಗವು ಅಗತ್ಯವಿದ್ದಲ್ಲಿ ತನ್ನ ವಿವೇಚನೆಯಂತೆ ಮತ್ತು ಅಂತರ್ಹಿಂದುಳಿದಿರುವಿಕೆಯ ಬಗ್ಗೆ ಇನ್ನಿತರ ಸೂಕ್ತ ದತ್ತಾಂಶಗಳು (Empirical data) ಲಭ್ಯವಿದ್ದಲ್ಲಿ ಸಂಗ್ರಹಿಸಬಹುದು.
5. ಪರಿಶಿಷ್ಟ ಜಾತಿಯೊಳಗಿನ ವಿವಿಧ ಉಪ ಗುಂಪುಗಳ ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯ ವಿವಿಧ ಸಮಸ್ಯೆಗಳನ್ನು ಪರಿಶೀಲಿಸುವ ಬಗ್ಗೆ, ಮತ್ತು ಮಾನ್ಯ ಸರ್ವೋಚ್ಚ ನ್ಯಾಯಾಲಯವು (ಪಂಜಾಬ್ ರಾಜ್ಯ ಮತ್ತು ಇತರರ ವಿರುದ್ಧ ಶ್ರೀ ದೇವಿಂದರ್ ಸಿಂಗ್ ಮತ್ತು ಇತರರು ಸಿವಿಲ್ ಮೇಲ್ಮನವಿ ಸಂಖ್ಯೆ: 2317/2011ರ ದಿನಾಂಕ:01-08-2024ರ ಪ್ರಕರಣದಲ್ಲಿ) ನೀಡಿರುವ ತೀರ್ಪಿನ ಅನ್ವಯ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ (ಉಪ-ವರ್ಗೀಕರಣ) ಬಗ್ಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ವಿಧಾನ ಬಗ್ಗೆ ಪರಿಶೀಲಿಸುವುದು.
6. ಮೀಸಲಾತಿ ನೀತಿಗಳ ಪ್ರಯೋಜನವನ್ನು ಪರಿಶಿಷ್ಟ ಜಾತಿಗಳ ವಿವಿಧ ಉಪ ಗುಂಪುಗಳ ನಡುವೆ ಸಮಾನವಾಗಿ ಪಡೆಯಲಾಗುತ್ತಿದೆಯೇ ಎಂಬುದರ ಬಗ್ಗೆ ಪರಿಶೀಲಿಸುವುದು ಮತ್ತು ಮೇಲ್ಕಂಡ ಎಲ್ಲಾ ಅಂಶಗಳ ಬಗ್ಗೆ ಕೈಗೊಳ್ಳಬಹುದಾದ ಇತರ ಕ್ರಮಗಳ ಕುರಿತು ನಿರ್ದಿಷ್ಟ ಶಿಫಾರಸ್ಸುಗಳೊಂದಿಗೆ ವರದಿಯನ್ನು ಸಲ್ಲಿಸುವುದು.
ಮೇಲಿನಂತೆ ಆಯೋಗಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಣೆ ಕುರಿತು ಅಥವಾ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯುವ ಬಗ್ಗೆ, terms of reference ನಲ್ಲಿ ಸೇರಿರುವುದಿಲ್ಲ. ಸರ್ವೇ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಯವರು ಕರ್ನಾಟಕ ರಾಜ್ಯದವರಾಗಿರುವ ಬಗ್ಗೆ
ಅಧಿಕೃತ ದಾಖಲೆಗಳನ್ನು ಹೊಂದಿದ್ದು ಗಣತಿದಾರರಿಗೆ ತಮ್ಮ ಜಾತಿಯನ್ನು ಮತ್ತು ಇತರ ಮಾಹಿತಿಯನ್ನು ಗಣತಿದಾರರಿಗೆ ನಿಖರವಾಗಿ ನೀಡುವುದು. ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಈ ಸಮೀಕ್ಷೆಯ ಆಧಾರದ ಮೇಲೆ ನೀಡಲು ಅವಕಾಶವಿರುವುದಿಲ್ಲ. ಅರ್ಜಿದಾರರು ಕರ್ನಾಟಕ ಅನುಸೂಚಿತ ಜಾತಿಗಳು ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ಅಧಿನಿಯಮ, 1990 ಮತ್ತು ನಿಯಮಗಳು, 1992 ಗಳಂತೆ ನಿಗದಿತ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ ನಿಯಮಾನುಸಾರ ಜಾತಿ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ.
ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ- 2025 ಕ್ಕೂ ಜಾತಿ ಪ್ರಮಾಣ ಪತ್ರ ನೀಡುವುದಕ್ಕೂ ಯಾವುದೇ ಸಂಬಂಧವಿರುವುದಿಲ್ಲ. ಆದ್ದರಿಂದ, ಕರ್ನಾಟಕ ಪರಿಶಿಷ್ಟ ಜಾತಿ ಪಟ್ಟಿಗೆ 101 ಸಮುದಾಯಗಳು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯದೇ ಇದ್ದಲ್ಲಿಯೂ ಸಹ ಸಮೀಕ್ಷೆಯಲ್ಲಿ ನಿಖರ ಮಾಹಿತಿಯನ್ನು ನೀಡಬಹುದು. (ಆದರೆ, ಪರಿಶಿಷ್ಟ ಪಂಗಡ ಅಥವಾ ಇತರೇ ಹಿಂದುಳಿದ ವರ್ಗಗಳ ಜಾತಿ ಪ್ರಮಾಣ ಪತ್ರವನ್ನು ಈಗಾಗಲೇ ಪಡೆದಿದ್ದಲ್ಲಿ, ಅಂತಹವರನ್ನು ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿ ಎಂದು ಪರಿಗಣಿಸಲು ಅವಕಾಶವಿಲ್ಲ).
ಉಲ್ಲೇಖ (2) ರಿಂದ (6) ರಲ್ಲಿನ ಜಿಲ್ಲಾಧಿಕಾರಿಗಳ ಪತ್ರದಲ್ಲಿ ಗಣತಿದಾರರಿಗೆ ನೀಡಿರುವ ಕೈಪಿಡಿಯಲ್ಲಿನ FAQ 90 ರಲ್ಲಿ ಬೇಡ ಜಂಗಮ ಸಮುದಾಯದವರಿಗೆ ಜಾತಿ ಪ್ರಮಾಣ ಪತ್ರದ ಆಧಾರದ ಮೇಲೆ ಸಮೀಕ್ಷೆ ನಡೆಸುವುದು ಎಂದು ತಿಳಿಸಲಾಗಿರುತ್ತದೆ. ಮುಂದುವರೆದು FAQ 31 ರಲ್ಲಿ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆಯುವ ಅಗತ್ಯವಿಲ್ಲವೆಂದು ತಿಳಿಸಲಾಗಿದ್ದು, ಸಮೀಕ್ಷೆಯಲ್ಲಿ FAQ-90 ರಂತೆ ಬೇಡ ಜಂಗಮ ಜಾತಿಯವರ ಜಾತಿ ಪ್ರಮಾಣ ಪತ್ರದ ಆಧಾರದ ಮೇಲೆ ಸಮೀಕ್ಷೆಯನ್ನು ಕೈಗೊಳ್ಳಬೇಕೆ? ಎಂಬುದರ ಬಗ್ಗೆ ಸೃಷ್ಟಿಕರಣ ಕೋರಿರುತ್ತಾರೆ.
ಕೈಪಿಡಿಯಲ್ಲಿನ ಪುಟ ಸಂಖ್ಯೆ: 83 ರಲ್ಲಿ (ಅನುಬಂಧ-4) ಜಿಲ್ಲಾ ಮಟ್ಟದಲ್ಲಿ ನಡೆದ
ತರಬೇತಿಗಳಲ್ಲಿ ಕೇಳಿದ ವಿವಿಧ ಪ್ರಶ್ನೆಗಳಿಗೆ ಸ್ಪಷ್ಟಿಕರಣದ ನೀಡುವ ಬಗ್ಗೆ ನಮೂದಿಸಲಾಗಿದೆ. ಸದರಿ ಸ್ಪಷ್ಟಿಕರಣಗಳಲ್ಲಿ ಕ್ರ.ಸಂ.90 ರಲ್ಲಿ ನೀಡಿರುವ ಸ್ಪಷ್ಟಿಕರಣವನ್ನು ಕೈ ಬಿಡಲಾಗಿದೆ. ಮತ್ತು FAQ-90 ರಲ್ಲಿನ ಪ್ರಶ್ನೆಗೆ ಅನುಕ್ರಮ ಸಂಖ್ಯೆ-31 ಮತ್ತು ಅನುಕ್ರಮ ಸಂಖ್ಯೆ 11 ರಲ್ಲಿ ಸೂಚಿಸಿರುವಂತೆ ಕ್ರಮವಹಿಸಲು ತಿಳಿಸಿದೆ.
ಮುಂದುವರೆದು, ಸ್ವಯಂ ಧೃಡೀಕರಣ ಪತ್ರದಲ್ಲಿ ಕುಟುಂಬದ ಮುಖ್ಯಸ್ಥರು/ಮಾಹಿತಿದಾರರು ಅವರೇ ಖುದ್ದಾಗಿ ಮಾಹಿತಿಯನ್ನು ದೃಡೀಕರಿಸಿರುವುದರಿಂದ, ತಮ್ಮ ಜಾತಿಯನ್ನು ಸರಿಯಾಗಿ ಘೋಷಿಸದೆ. ಮುಂದಿನ ದಿನಗಳಲ್ಲಿ ಸುಳ್ಳು ಘೋಷಣೆ ಸಲ್ಲಿಸಿರುವುದು ಕಂಡುಬಂದಲ್ಲಿ ಕಾನೂನು ರೀತಿಯ ಕ್ರಮ ಜರುಗಿಸಲಾಗುತ್ತದೆ.
ಈ ಮೇಲಿನ ಅಂಶಗಳನ್ನು ಎಲ್ಲಾ ಗಣತಿದಾರರಿಗೆ ಹಾಗೂ ಮೇಲ್ವಿಚಾರಕರ ಗಮನಕ್ಕೆ ತರಲು ಜಿಲ್ಲಾ ಮಟ್ಟದ/ಬಿ.ಬಿ.ಎಂ.ಪಿ/ತಾಲ್ಲೂಕು ಮಟ್ಟದ ಸಮಿತಿಗಳು ಸೂಕ್ತ ಕ್ರಮವಹಿಸುವಂತೆ ತಿಳಿಸಲು ಮಾನ್ಯ ಅಧ್ಯಕ್ಷರಿಂದ ನಿರ್ದೇಶಿಸಲ್ಪಟ್ಟಿದ್ದೇನೆ. ಈ ಕುರಿತು ನಿರ್ದೇಶನ ಪತ್ರ.