Good news for women in the state: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ-2025
Good news for women in the state: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಲು ನೆರವಾಗುವ ಈ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವನ್ನು ನಿಗದಿ ಪಡಿಸಲಾಗಿದೆ.
ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿ ಮಾಡುವ ಉದ್ದೇಶವನ್ನು ಇಟ್ಟುಕೊಂಡು ರಾಜ್ಯ ಸರ್ಕಾರ ಈ ಮಹತ್ವದ ಯೋಜನೆಯ್ನು ಜಾರಿಗೆ ತಂದಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಬಡ ಕುಟುಂಬದ ಜನರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಅನುಷ್ಠಾನ ಮಾಡಲಾಗುತ್ತಿದೆ.
ಉಚಿತ ಹೊಲಿಗೆ ಯಂತ್ರಗಳನ್ನು ಪಡೆಯಲು ಅರ್ಹತೆ ಮಾನದಂಡ ಏನೇನು ಇವೆ.
ಹಿಂದುಳಿದ ವರ್ಗಗಳ ಬಡ ಕುಟುಂಬದ ಮಹಿಳೆಯರಿಗೆ ಹೂಲಿಗೆ ಯಂತ್ರಗಳನ್ನು ಪಡೆಯುವ ಸೌಲಭ್ಯ ಪಡೆಯಲು ಇಚ್ಛೆಯುಳ್ಳವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.
ಆಯ್ದ ಸಮುದಾಯಗಳ ಮಹಿಳೆಯರಿಗೆ ಮಾತ್ರ ಈ ಯೋಜನೆಯ ಅವಕಾಶ ಪಡೆಯಬಹುದಾಗಿದೆ.
ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದ ಮಹಿಳೆಯರಿಗೆ ರೂ.98,000/-ಗಳು ಪಟ್ಟಣ ಪ್ರದೇಶದ ಮಹಿಳೆಯರಿಗೆ ರೂ.1,20,000/-ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯನ್ನು ಹೊಂದಿರಬೇಕು.
ಅಭ್ಯರ್ಥಿಗಳ ವಯೋಮಿಮಿ 18 ರಿಂದ 55 ವರ್ಷಗಳ ಒಳಗೆ ಇರಬೇಕು ಎನ್ನುವ ನಿಯಮವನ್ನು ನೀಡಲಾಗಿದೆ.
ಈ ಯೋಜನೆಯಲ್ಲಿ ಮೊದಲು ಸೌಲಭ್ಯವನ್ನು ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯವನ್ನು ಕೋರಿ ಮತ್ತೊಮ್ಮೆ ಅರ್ಜಿ ಸಲ್ಲಿಕೆ ಮಾಡಿ ಸೌಲಭ್ಯ ಪಡೆಯಲು ಅವಕಾಶ ನೀಡಲಾಗುವದಿಲ್ಲ.
▪️ ಸನ್ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಕೆ ಮಾಡಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಜಿ ಸಲ್ಲಿಕೆ ಮಾಡುವ ವಿಧಾನ ಹೇಗೆ?
ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಂಪೂರ್ಣವಾಗಿ ಆನ್ಲೈನ್ ಮೂಲಕ ಇರುವದರಿಂದ ಸೇವಾ ಸಿಂಧು ಪೋರ್ಟಲ್ (Seva Sindhu Portal) ಅಥವಾ ಗ್ರಾಮಒನ್ ಕೇಂದ್ರಗಳ ಮೂಲಕ ಸಲ್ಲಿಕೆ ಮಾಡಬಹುದಾಗಿದೆ.ಸೇವಾ ಸಿಂಧು ಪೋರ್ಟಲ್ಗೆ https://sevasindhuservices.karnataka.gov.in/ ಗೆ ಭೇಟಿ ನೀಡುವುದರ ಮೂಲಕ.
ಇ-ಮೇಲ್ ಐಡಿ, ಆಧಾರ್ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆ ನಮೂದಿಸಿ ಲಾಗಿನ್ ಆಗಿ.
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹೊಲಿಗೆ ಯಂತ್ರ ವಿತರಣೆ ಯೋಜನೆ ಅರ್ಜಿಯನ್ನು ಸರ್ಚ್ ಮಾಡಿ.
ಅರ್ಜಿಯಲ್ಲಿ ಕೇಳಲಾಗುವ ಸಂಪೂರ್ಣ ಮಾಹಿತಿಯನ್ನು ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳುವುದು ಉಪಯುಕ್ತ.
ಈ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಬೇಕಾದ ಅವಶ್ಯಕ ದಾಖಲೆಗಳು ಏನು?
ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವಂತಹ ಬ್ಯಾಂಕ್ ಅಕೌಂಟ್ ಪಡೆದಿರಬೇಕು.ಆಧಾರ್ ಕಾರ್ಡ್ ನಲ್ಲಿ ನಮೂದಾಗಿರುವಂತೆ ಅರ್ಜಿದಾರರ ಹೆಸರು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೂಂದಾಣಿಕೆಯಾಗುವಂತಿಬೇಕು.
ಅಂಗವೈಕಲ್ಯವಿದ್ದಲ್ಲಿ ವೈದ್ಯಕೀಯ ಪ್ರಮಾಣ ಪತ್ರ
ನಿರ್ಗತಿಕ ವಿಧವೆ ಮಹಿಳೆಯರಿಗೆ ವಿಧವಾ ಪ್ರಮಾಣ ಪತ್ರ
ಮೊಬೈಲ್ ಸಂಖ್ಯೆ ಹಾಗೂ ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹೊಂದಿರಬೇಕು.
ಇದನ್ನೂ ನೋಡಿ….
ಇ-ಕೆವೈಸಿ, ಅರ್ಹತಾ ಮಾನದಂಡ ಪಾಲಿಸದ ರೈತರಿಗೆ ಸಿಗಲ್ಲ ಪಿಎಂ ಕಿಸಾನ್ ಹಣ. ಇಲ್ಲಿದೆ ನೋಡಿ ನೂತನ ಮಾಹಿತಿ!