PM-KISAN samman Nidhi: ಇ-ಕೆವೈಸಿ, ಅರ್ಹತಾ ಮಾನದಂಡ ಪಾಲಿಸದ ರೈತರಿಗೆ ಸಿಗಲ್ಲ ಪಿಎಂ ಕಿಸಾನ್ ಸಮ್ಮಾನ್ ನಿಧಿ ಹಣ-2025
Pm-kisan samman Nidhi: ರಾಜ್ಯದಲ್ಲಿ 2018-19ನೇ ಸಾಲಿನಿಂದ ಪ್ರಧಾನ ಮಂತ್ರಿ ಕಿಸಾನ್ (Pradhan Mantri Kisan Samman Nidhi PM-KISAN) ಯೋಜನೆಯನ್ನು ಕೇಂದ್ರ ಸರ್ಕಾರದ ಶೇಕಡ 100 ರಷ್ಟು ಅನುದಾನದೊಂದಿಗೆ ಅನುಷ್ಠಾನಗೊಳಿಸಲಾಗಿರುತ್ತದೆ.
ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಪೂರಕವಾದ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿರುತ್ತದೆ.
ಇ-ಕೆವೈಸಿ, ಅರ್ಹತಾ ಮಾನದಂಡ ಪಾಲಿಸದ ರೈತರಿಗೆ ಸಿಗಲ್ಲ ಪಿಎಂ ಕಿಸಾನ್ ಹಣ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಡಿ ವರ್ಷಕ್ಕೆ 6,000 ರೂ. ರೈತರ ಖಾತೆಗೆ ಜಮಾ ಮಾಡಲಾಗುತ್ತಿದ್ದು, ಈ ಹಣವನ್ನು ಅರ್ಹ ರೈತರಿಗೆ ಮಾತ್ರ ತಲುಪಿಸಲು ಸರ್ಕಾರ ಸ್ಪಷ್ಟ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಇ-ಕೆವೈಸಿ ಮಾಡಿಸದ ರೈತರಿಗೆ ಮುಂದಿನ 20ನೇ ಕಂತಿನ ಹಣ ಲಭ್ಯವಾಗುವ ಸಾಧ್ಯತೆ ಕಡಿಮೆ. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಇಲ್ಲದಿದ್ದರೂ ಕೂಡ ತಕ್ಷಣವಾಗಿ NPCI ಮ್ಯಾಪಿಂಗ್ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ https://pmkisan.gov.in ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ